Postmortem - ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ

 ಮುನಿಯಬೇಡ:

ಗಂಡನೆಂಜಲಿಗೆ ಹೇಸುವಳು ಮಿಂಡನ ತಂಬುಲ ತಿಂಬ ತೆರನಂತೆ,
ಗುರುವಿನಲ್ಲಿ ಉಪದೇಶ ಪಡೆದು ಪ್ರಸಾದಕ್ಕೆ ಸೂತಕವ ಮಾಡುವ
ಪಂಚಮಹಾಪಾತಕರು ನೀವು ಕೇಳಿ ಭೋ.
ಅಂಡದೊಳಗೆ ಹುಟ್ಟಿದ ಉತ್ಪತ್ತಿಯೆಲ್ಲವೂ ಗುರುವಿಂದಾಯಿತ್ತು.
ಮತ್ತೆ ಮಿಂಡ ಮೈಲಾರ ಬೀರ ಭೈರವ ಯಕ್ಕನಾತಿ
ಕುಕ್ಕನೂರ ಬಸದಿ ಕೇತಧೂಳನೆಂಬ ಕಾಳುದೈವಕ್ಕೆರಗಿ,
ಶಿವಭಕ್ತನೆನಿಸಿಕೊಂಬ ಚಂಡಿನಾಯಿಗಳ ಕಂಡು,
ಎನ್ನ ಮನ ಹೇಸಿತ್ತು ಕಾಣಾ, ಕಲಿದೇವರದೇವಾ.
- ಮಡಿವಾಳ ಮಾಚಿದೇವ
ಇದಿರ ಹಳಿಯಲು ಬೇಡ:
ವಿಷ್ಣುವ ಪೂಜಿಸಿ ಮುಡುಹ ಸುಡಿಸಿಕೊಂಬುದ ಕಂಡೆ,
ಜಿನನ ಪೂಜಿಸಿ ಬತ್ತಲೆಯಿಪ್ಪುದ ಕಂಡೆ,
ಮೈಲಾರನ ಪೂಜಿಸಿ ನಾಯಾಗಿ ಬಗಳುವುದ ಕಂಡೆ,
ನಮ್ಮ ಕೂಡಲಸಂಗನ ಪೂಜಿಸಿ ದೇವಾ,
ಭಕ್ತರೆನಿಸಿಕೂಂಬುದ ಕಂಡೆ.
- ಬಸವಣ್ಣ
ಅನ್ಯರಿಗೆ ಅಸಹ್ಯಪಡಬೇಡ:
ಲಿಂಗಾರ್ಪಿತವಿಲ್ಲದೆ ಬೋನ ಪದಾರ್ಥವ ಕೊಂಡಡೆ,
ಮಕ್ಕಳಡಗು ನರಮಾಂಸವಯ್ಯಾ.
ಲಿಂಗಾರ್ಪಿತವಿಲ್ಲದೆ ಉದಕವ ಮುಕ್ಕುಳಿಸಿದಡೆ
ನಾಯ ಮೂತ್ರವ ಮುಕ್ಕಳಿಸಿದುದಯ್ಯಾ.
ಲಿಂಗಾರ್ಪಿತವಿಲ್ಲದೆ ಹಲುಕಡ್ಡಿಯನಿರಿದಡೆ
ನಾಯ ಎಲುಬಿದ್ದ ಮಲಕ್ಕೆ ಬಾಯಿದೆರೆದು.
ನಿಮಗೆತ್ತಿದ ಕರವ ಅನ್ಯರಿಗೆ ಮುಗಿದಡೆ ಅಘೋರ ನರಕವಯ್ಯಾ.
ಈ ಭಾಷೆಗೆ ತಪ್ಪಿದಡೆ ತಲೆದಂಡ ತಲೆದಂಡ, ಅಳವರಿಯದೆ ನುಡಿದೆನು, ಕಡೆಮುಟ್ಟಿ ನಡಸಯ್ಯಾ. ಪ್ರಭುವೆ ಕೂಡಲಸಂಗಮದೇವಾ.
- ಬಸವಣ್ಣ
ತನ್ನ ಬಣ್ಣಿಸಬೇಡ:
ಬಸವ ಹರಿಯಿತ್ತು, ಬಸವ ಹರಿಯಿತ್ತು, ಬಸವ ಹರಿಯಿತ್ತು ಕಾಣಿಭೋ.
ತೊತ್ತಳದುಳಿಯಿತ್ತು, ತೊತ್ತಳದುಳಿಯಿತ್ತು.
ಮೀಮಾಂಸಕರ ಮಿತ್ತುವ ಮಿರಿಯಿತ್ತು,
ಬೌದ್ಧ ಜೈನರ ಕೋಡಿನಲ್ಲಿರಿಯಿತ್ತು,
ಕೊಳಗಿನಲ್ಲರೆಯಿತ್ತು ನೋಡಾ, ಸೊಡ್ಡಳಾ
ಸಂಗನಬಸವ.
-ಸೊಡ್ಡಳ ಬಾಚರಸ
ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ!?!
(ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ)

No comments: